ಶಿಕ್ಷಣ-ಆರೋಗ್ಯ ಸಚಿವರ ಜಟಾಪಟಿ: ಸಿಎಂ ಹೇಳಿದ್ದೇನು?

247

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕವನ್ನ ಸೋಮವಾರ ಶಿಕ್ಷಣ ಸಚಿವರು ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಆರೋಗ್ಯ ಸಚಿವರಿಂದ ಅಸಮಾಧಾನ ವ್ಯಕ್ತವಾಗಿದೆ. ಪರೀಕ್ಷೆ ದಿನಾಂಕದ ಬಗ್ಗೆ ನನಗೆ ಗೊತ್ತೇ ಇಲ್ಲ ಅನ್ನೋ ಮಾತನ್ನ ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ.

ಆರೋಗ್ಯ ಸಚಿವರ ಮಾತಿನಿಂದಾಗಿ ಗೊಂದಲ ಮೂಡಿದೆ. ಏಕಪಕ್ಷಿಯವಾಗಿ ಶಿಕ್ಷಣ ಸಚಿವರು ತೀರ್ಮಾನ ತೆಗೆದುಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಣ ಸಚಿವರು ಪೂರ್ವಭಾವಿಯಾಗಿ ತಮ್ಮೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯವೆಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!