ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಜೂನ್ ಅಥವ ಜುಲೈ ತಿಂಗಳಿನಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಪರೀಕ್ಷೆಯ ಪೂರ್ವ ಸಿದ್ಧತೆ ಮಾಡಿಕೊಳ್ಳಿಯೆಂದು ಜಿಲ್ಲಾ ಉಪ ನಿರ್ದೇಶಕರಿಗೆ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸೂಚಿಸಿದೆ.
ಮಾರ್ಚ್ 27, 2020ರಂದು ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನ, ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಮೇ 4ರಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಎಲ್ಲ ಉಪ ನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ, ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಠಿಯಿಂದ 25 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಒಂದು ಕೊಠಡಿಯಲ್ಲಿದ್ರೆ 20 ವಿದ್ಯಾರ್ಥಿಗಳಂತೆ ವ್ಯವಸ್ಥೆ ಮಾಡುವುದು, ಸಾಮಾಜಿಕ ಅಂತರ, ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ಹೆಚ್ಚುವರಿ ಕೊಠಡಿಯ ವ್ಯವಸ್ಥೆ ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನ ಮೇ 15ರ ಒಳೆಗೆ ನೀಡಲು ಸೂಚಿಸಲಾಗಿದೆ.