ಬೆಂಗಳೂರು: ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಶಿಕ್ಷಣ ಸಚಿವ ಸುರೇಶಕುಮಾರು ಅವರು ಚರ್ಚೆ ನಡೆಸಿದ್ರು. ಬಳಿಕ ಮಾತ್ನಾಡಿದ ಅವರು, ಅಂತಿಮ ಸಭೆಯನ್ನ ಮೇ 18ರಂದು ನಡೆಸಲಾಗುತ್ತೆ ಎಂದಿದ್ದಾರೆ.
ಒಂದು ಕೊಠಡಿಯಲ್ಲಿ ಎಷ್ಟು ವಿದ್ಯಾರ್ಥಿಗಳಿರಬೇಕು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲ ವಿಚಾರಗಳನ್ನ ಚರ್ಚೆ ಮಾಡಿ, ದಿನಾಂಕ, ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಇನ್ನು ಶಾಲೆಗಳು ಶುಲ್ಕ ಸಂಗ್ರಹಿಸುವುದಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸುವ ಮೊದ್ಲೇ ಫೀ ಸಂಗ್ರಹ ಮಾಡುವಂತಿಲ್ಲವೆಂದು ಹೇಳಿದ್ದಾರೆ. ಒಂದು ವೇಳೆ ಪೋಷಕರು ಶಾಲಾ ಶುಲ್ಕ ನೀಡಲು ಒಪ್ಪಿಕೊಂಡ್ರೆ ಪಡೆದುಕೊಳ್ಳಬಹುದು. ಆದ್ರೆ, ಅವರಿಗೆ ಪೀಡಿಸುವಂತಿಲ್ಲವೆಂದು ತಿಳಿಸಿದ್ದಾರೆ.