ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ 10ನೇ ತರಗತಿ ಪರೀಕ್ಷೆ ಶುರುವಾಗ್ಲೇ ಮೊದ್ಲೇ ಮುಂದೂಡಲಾಗಿತ್ತು. ಇದೀಗ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ.
ಫೇಸ್ ಬುಕ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ನೀಡಿರುವ ಸಚಿವರು, ಜೂನ್ ಎರಡು ಅಥವ ಮೂರನೇ ವಾರದಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಯೋಚನೆ ಮಾಡಲಾಗಿದೆ ಎಂದಿದ್ದಾರೆ. ಇನ್ನು ಸಾಮಾಜಿಕ ಅಂತರದ ದೃಷ್ಟಿಯಿಂದೆ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
ಇನ್ನು ಊರಿಗೆ ಹೋದ ವಿದ್ಯಾರ್ಥಿಗಳಿಗೆ ಸಮೀಪದ ಶಾಲೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವ ಸಂಬಂಧ ಚರ್ಚೆ ನಡೆದಿದೆ. ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ದಿನದಿಂದ ಕನಿಷ್ಠ 15 ದಿನ ಅಂತರವಿರುತ್ತೆ. ಪರಿಸ್ಥಿತಿ ಸುಧಾರಿಸದ ನಂತರವೇ ಪರೀಕ್ಷೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲವಾಗುವುದು ಬೇಡವೆಂದು ಸಚಿವರು ತಿಳಿಸಿದ್ದಾರೆ.