ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮುಂದೂಡಿ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಸೇರಿದಂತೆ ಹಲವು ಪರೀಕ್ಷೆಗಳನ್ನ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಮಾರ್ಚ್ 27ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಮುಂದೂಡಬೇಕೆಂದು ಒತ್ತಡ ಕೇಳಿ ಬಂದಿತ್ತು. ಹೀಗಾಗಿ ಪರೀಕ್ಷೆ ಮುಂದೂಡಲಾಗಿದೆ ಎಂದಿದ್ದಾರೆ. ಪ್ರಧಾನಿ ಮೋದಿ ನೀಡಿರುವ ಜನತಾ ಕರ್ಫ್ಯೂಗೆ ಜನ ಸ್ಪಂದಿಸ್ತಿದ್ದಾರೆ. ಅವರಿಗೆ ಧನ್ಯವಾದಗಳನ್ನ ಹೇಳುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.