ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಶೇಕಡ 73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 625ಕ್ಕೆ 625 ಅಂಕ ಗಳಿಸುವ ಮೂಲಕ ಫಸ್ಟ್ ರ್ಯಾಂಕ್ ಬಂದಿದ್ದಾಳೆ.
ವಿದ್ಯಾರ್ಥಿನಿ ಅಂಕಿತಾ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದವಳಾಗಿದ್ದು, ಅಲ್ಲದೇ ಅದೇ ಗ್ರಾಮದಲ್ಲಿದ್ದ ಮೂರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. 7 ವಿದ್ಯಾರ್ಥಿಗಳು 624, 14 ವಿದ್ಯಾರ್ಥಿಗಳು 623, 21 ವಿದ್ಯಾರ್ಥಿಗಳು 622, 44 ವಿದ್ಯಾರ್ಥಿಗಳು 621 ಹಾಗೂ 64 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ.
ಶೇಕಡ 94ರಷ್ಟು ಫಲಿತಾಂಶ ಸಾಧಿಸಿರುವ ವಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಒಟ್ಟು 8 ಲಕ್ಷದ 59 ಸಾವಿರದ 967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 6 ಲಕ್ಷದ 31 ಸಾವಿರದ 204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.