ಆಗಸ್ಟ್ 10ರೊಳಗೆ ಎಸ್ಎಸ್ಎಲ್ ಸಿ ಫಲಿತಾಂಶ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ 2 ಹಂತದಲ್ಲಿ ಹೊಸ ಮಾದರಿಯಲ್ಲಿ ನಡೆಸಿದ ಪರೀಕ್ಷೆಯನ್ನ ವಿದ್ಯಾರ್ಥಿಗಳು ಎದುರಿಸಿದ್ದಾರೆ. ಈ ಬಗ್ಗೆ ಮಾತ್ನಾಡಿರುವ ಶಿಕ್ಷಣ ಸಚಿವ ಸುರೇಶಕುಮಾರ, ಆಗಸ್ಟ್ 10ರೊಳಗೆ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಮಳೆ ಹಾಗೂ ಸಾರಿಗೆ ಸಮಸ್ಯೆಯಿಂದ ಗೈರಾಗದೆ ಶೇಕಡ 99.65ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡ್ ಆತಂಕದ ನಡುವೆ ಯಶಸ್ವಿಯಾಗಿ ಪರೀಕ್ಷೆ ಮುಗಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ ಎಂದರು. ಕೋವಿಡ್ ಕೇರ್ ಸೆಂಟರ್ ನಿಂದ 67 ವಿದ್ಯಾರ್ಥಿಗಳು, ಐಸೋಲೇಷನ್ ನಿಂದ 152 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಹಾಸನ ಹಾಗೂ ಕೋಲಾರದಲ್ಲಿ ತಲಾ ಒಬ್ಬ ಕೋವಿಡ್ ಪಾಸಿಟಿವ್ ವಿದ್ಯಾರ್ಥಿ ಗೈರಾಗಿದ್ದಾರೆ ಎಂದರು.

ಪರೀಕ್ಷೆ ಯಶಸ್ವಿಯಾಗಿ ನಡೆಯುವಲ್ಲಿ ಸಹಕರಿಸಿದ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ, ಶಿಕ್ಷಣ ಇಲಾಖೆ ಜೊತೆ ಕೈ ಜೋಡಿಸಿದ ಶಾಸಕರು ಸೇರಿದಂತೆ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!