ಪ್ರಜಾಸ್ತ್ರ ಸುದ್ದಿ
ತುಮಕೂರು: ಕೋವಿಡ್ 19 ಸೋಂಕು ವ್ಯಾಪಕವಾಗ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ವಿರೋಧ ಕೇಳಿ ಬಂದಿತ್ತು. ಇದರ ನಡುವೆಯೂ ಪರೀಕ್ಷೆ ಶುರುವಾಗಿದೆ. ಹೀಗಿರುವಾಗ್ಲೇ ಪರೀಕ್ಷೆಗೆ ಬಂದ ವಿದ್ಯಾರ್ಥಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿವೆ.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯಲ್ಲಿ ಕರೋನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ, ನಿಗದಿತ ಆಸ್ಪತ್ರೆಗೆ ಕರೆದೆಕೊಂಡು ಹೋಗಲಾಗಿದೆ ಎಂದು ಹೇಳಲಾಗ್ತಿದೆ.
ಕೆಲವರು ಆಂಧ್ರದ ಮೂಲದ ರಾಯದುರ್ಗ ಮೂಲದ ವಿದ್ಯಾರ್ಥಿ ಸಂಬಂಧಿಕರ ಮನೆಗೆ ಬಂದಿದ್ದ ಎನ್ನುತ್ತಿದ್ದಾರೆ. ಮತ್ತೆ ಕೆಲವರು ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿದ್ದ ವಿದ್ಯಾರ್ಥಿ ಮೂರು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಎನ್ನುತ್ತಿದ್ದಾರೆ. ಅಲ್ದೇ, ವಿದ್ಯಾರ್ಥಿ ತಾಯಿಗೆ ಸೋಂಕು ದೃಢಪಟ್ಟಿದೆಯಂತೆ. ಹೀಗಾಗಿ ಆತನ ತಂದೆ ಜೊತೆ ಮಾತ್ನಾಡಿ, ಮುಂದಿನ ಸಾರಿ ಫ್ರೆಷ್ ವಿದ್ಯಾರ್ಥಿಯೆಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಸಾಂದರ್ಭಿಕ ಚಿತ್ರ