ಪ್ರಜಾಸ್ತ್ರ ಸುದ್ದಿ
ಮೈಸೂರು: ವಿದ್ಯುತ್ ತಗುಲಿ 16 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ತಿ.ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿಯಿಂದ ಮೂವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಮತ್ತೊಂದು ದುರಂತ ನಡೆದಿದೆ.
ಮವತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮನೋಜ್(16), ಮನೆ ಮುಂದೆ ಇರುವ ನುಗ್ಗೆ ಮರದ ಹತ್ತಿರ ನಿಂತಿದ್ದಾಗ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಾಡೇಗೌಡರ ಇಬ್ಬರು ಮಕ್ಕಳಲ್ಲಿ ಮನೋಜ್ ಮೊದಲ ಮಗನಾಗಿದ್ದಾನೆ.
ಸೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿಯಿಂದಲೇ ಮೃತಪಟ್ಟ ಘಟನೆ ಒಂದು ದಿನ ಹಿಂದೆ ನಡೆದಿದೆ.