ಹುಬ್ಬಳ್ಳಿ: ಹಾಡುಹಗಲೆ ಯುವಕನೋರ್ವನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಲೋಕಪ್ಪನ ಹಕ್ಕಲ್ ದಲ್ಲಿ ನಡೆದಿದೆ. 25 ವರ್ಷದ ಸುಭಾಷ ಮಲ್ಲೇಶಪ್ಪ ಎಂಬಾತನ ಮೇಲೆ ಮೂವರು ವ್ಯಕ್ತಿಗಳು ಚಾಕುವಿನಿಂದ ಹಲವು ಕಡೆ ಇರಿದಿದ್ದಾರೆ.
28 ವರ್ಷದ ಪುರುಷೋತ್ತಮ ತೆನಿಗೊಂಡ ಸೇರಿದಂತೆ ಮೂವರಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಸುಭಾಷಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದೆ.
ಇನ್ನು ಚಾಕು ಇರಿತಕೊಳ್ಳಗಾದ ಸುಭಾಶ ಜೆಡಿಎಸ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಕಮೀಷನರ್ ದಿಲೀಪ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.