ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡಲಾಗುತ್ತೆ ಎಂದು ದೊಡ್ಡ ಮಟ್ಟದ ಚರ್ಚೆ ರಾಜ್ಯದಲ್ಲಿ ನಡೆದಿದೆ. ಈ ಬಗ್ಗೆ ಸಿಎಂ, ಮಾಜಿ ಸಿಎಂ ಸೇರಿ ಅನೇಕರು ಹೇಳಿಕೆ ನೀಡಿದರೂ, ಈ ಬಗ್ಗೆ ಚರ್ಚೆ ನಿಂತಿಲ್ಲ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮುಗಿದಿದೆ ಅನ್ನೋ ಚರ್ಚೆ ಶುರುವಾಗಿದೆ.
ಸಿಎಂ ಬದಲಾವಣೆ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವುದು ಹಾಗೂ ನನ್ನ ಅವಧಿ ಮುಗಿದಿದೆ ಎಂದು ಹೇಳಿದವರು ಯಾರು ಎಂದು ನಳೀನ್ ಕುಮಾರ್ ಕಟೀಲ್ ಅವರ ಮಾತಿನ ಕುರಿತು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಪಷ್ಟತೆ ಇಲ್ಲದೆ ಕಾಂಗ್ರೆಸ್ ಕೈಗೆ ಕೋಲು ಕೊಡುವವರು ಇವರೇ, ಹೊಡೆಸಿಕೊಂಡು ನಂತರ ಗೋಳಾಡುವವರೂ ಇವರೇ ಎಂದು ಕಾಲೆಳೆಯಲಾಗಿದೆ.