ಸಂಪುಟ ರಚನೆ ಬೆನ್ನಲ್ಲೇ ಭಿನ್ನಮತ ಸ್ಫೋಟ

241

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಯಾರಿಗೆ ಸಚಿವ ಸ್ಥಾನ ಸಿಕ್ಕಿದೆ ಅನ್ನೋದು ಇನ್ನು ಕೆಲ ಗಂಟೆಗಳಲ್ಲಿ ತಿಳಿಯಲಿದೆ. ಇದರ ನಡುವೆಯೂ ಭಿನ್ನಮತ ಸ್ಫೋಟಗೊಂಡಿದೆ. ಉಪ ಸಭಾಪತಿ ಆನಂದ ಮಾಮನಿ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ.

ಸಚಿವ ಸಂಪುಟದಲ್ಲಿ ಹೆಸರು ಇಲ್ಲದೆ ಹೋದರೆ ಉಪ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು, ಸವದತ್ತಿ ಶಾಸಕ ಆನಂದ ಮಾಮನಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮೂಲಕ ಬಿಜೆಪಿ ಪಾಳೆಯದಲ್ಲಿ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!