ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಜ್ಯ ಸಚಿವ ಸಂಪುಟ ಸಂಬಂಧ ಇಂದು ಸಂಜೆ ಅಂತಿಮ ಆಗುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಚೆ ನಡೆಸಲಿದ್ದು, ಇಂದು ಸಂಜೆ ಫೈನಲ್ ಆಗುವ ಸಾಧ್ಯತೆಯಿದೆ ಎಂದಿದ್ದಾರೆ.
ಎಷ್ಟು ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತೆ, ಯಾರಿಗೆಲ್ಲ ಅವಕಾಶ ನೀಡಬೇಕು, ಪ್ರಾದೇಶಿಕತೆ ನೋಡಬೇಕು, ಈ ಹಿಂದೆ ಇದ್ದವರು, ಹೊಸಬರಿಗೆ ಅವಕಾಶ ಕೊಡುವುದು ಸೇರಿದಂತೆ ಸಾಕಷ್ಟು ವಿಚಾರಗಳ ಚರ್ಚೆ ನಡೆಸ್ತಿದ್ದಾರೆ. ಹೀಗಾಗಿ ಬುಧವಾರ ಅಥವ ಗುರುವಾರ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.