ನಾಳೆ ದೆಹಲಿಗೆ ಸಿಎಂ: ಸಚಿವ ಸಂಪುಟ ವಿಸ್ತರಣೆ ಚರ್ಚೆ!

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಚಿವ ಸಂಪುಟ ಸೇರಬೇಕೆಂದು ಹಲವು ಬಿಜೆಪಿ ಶಾಸಕರು ಸರತಿ ಸಾಲಿನಲ್ಲಿದ್ದಾರೆ. ಆದರೆ, ಪುನರ್ ರಚನೆಯೂ ಆಗುತ್ತಿಲ್ಲ, ವಿಸ್ತರಣೆಯೂ ಆಗುತ್ತಿಲ್ಲ. ಹೀಗಾಗಿ ಸಚಿವರಾಗಬೇಕು ಅನ್ನೋರು ಸರ್ಕಸ್ ಮಾಡಿದ್ದೇ ಬಂತು. ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಅವರು ಶನಿವಾರ ಸಂಜೆ ದೆಹಲಿಗೆ ತೆರಳುತ್ತಿದ್ದು, ಸಚಿವ ಸಂಪುಟದ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಭಾನುವಾರ ಹೈಕಮಾಂಡ್ ನಾಯಕರನ್ನು ಸಿಎಂ ಭೇಟಿಯಾಗಲಿದ್ದಾರೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಈ ಬಾರಿಯ ಭೇಟಿಯಲ್ಲಾದರೂ ಸಚಿವಾಕಾಂಕ್ಷಿಗಳಿಗೆ ಸಹಿ ಸುದ್ದಿ ಸಿಗುತ್ತಾ ಕಾದು ನೋಡಬೇಕಿದೆ.




Leave a Reply

Your email address will not be published. Required fields are marked *

error: Content is protected !!