ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಲವು ಅಭಿವೃದ್ಧಿ ಕಾರ್ಯಗಳಿಗೆ ಕುರಿತಂತೆ ಅನುಮೋದನೆ, ಅನುದಾನ ಸಂಬಂಧ ಮಾರ್ಚ್ 23ರಂದು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ಎಂದು ಒಂದು ದಿನ ಮುಂದೂಡಲಾಗಿದೆ. ಸರ್ಕಾರದ ಜಂಟಿ ಕಾರ್ಯದರ್ಶಿ ಸಭೆಯ ಮುಂದೂಡಿಕೆ ಬಗ್ಗೆ ಸೂಚನಾ ಪತ್ರ ಹೊರಡಿಸಿದ್ದಾರೆ.
ಯುಗಾದಿ ಹಬ್ಬದ ಮರುದಿನವಾದ ಗುರುವಾರ ಮಧ್ಯಾಹ್ನ 12ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಭೆ ಕರೆಯಲಾಗಿತ್ತು. ಆದರೆ, ಇದೀಗ ಶುಕ್ರವಾರ ಸಂಜೆ 4ಗಂಟೆಗೆ ನಿಗದಿ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಈ ದಿಢೀರ್ ಬೆಳವಣಿಗೆ ಹಿಂದಿನ ಕಾರಣ ಏನು ಅನ್ನೋ ಪ್ರಶ್ನೆ ಮೂಡಿದೆ.