ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆಜಾನ್ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಭಜರಂಗದಳದವರು ಸಿಎಂ ಆಗಿದ್ದಾರೆ. ಸಿಎಂ ಬೊಮ್ಮಾಯಿ ಮೂಕ ಬಸವ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಲಾಲ್ ಸರ್ಟಿಫಿಕೇಟ್ ಪತಂಜಲಿ, ಅದಾನಿ ತಗೊಂಡಿಲ್ವಾ? ಇಸ್ಲಾಂ ದೇಶಗಳಿಂದ ಬರುವ ಇಂಧನ ನಿಲ್ಲಿಸಲಿ. ಧಮ್ಮ ಇಲ್ಲದ ಸರ್ಕಾರ, ಕೆಲಸಕ್ಕೆ ಬಾರದ ವಿಚಾರಗಳನ್ನು ತಂದಿಟ್ಟಿದ್ದಾರೆ. ಈ ಮೂಲಕ ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ ಆಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.