ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಸರ್ಕಾರ ಆಡಳಿತದ ವೈಫಲ್ಯ ಹಾಗೂ ದುರಾಡಳಿತದಿಂದ ದಿವಾಳಿ ಸರ್ಕಾರವಾಗಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಆರ್ಥಿಕ ಅಶಿಸ್ತಿನಲ್ಲಿದೆ ಎಂಬುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಜನರಿಗೆ ಜನಪರ ಯೋಜನೆಯನ್ನು ಜಾರಿಗೊಳಿಸದೇ ಸಾಲದ ಶೂಲ ಹಾಗೂ ಆರ್ಥಿಕ ಹೊಡೆತವನ್ನು ಸಾರ್ವಜನಿಕರಿಗೆ ಬಿಜೆಪಿ ಸರ್ಕಾರ ಉಡುಗೊರೆಯಾಗಿ ಕೊಟ್ಟಿದೆ. ಯಡಿಯೂರಪ್ಪ ಅವರ ದುರಾಡಳಿತ ದುಂದುವೆಚ್ಚದಿಂದ ರಾಜ್ಯದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದರು.
ಆರ್ಥಿಕ ವ್ಯವಸ್ಥೆಯಲ್ಲಿ ಹೆಚ್ಚಿನ ಆದಾಯ ಸಂಗ್ರಹ ಹಾಗೂ ವಾಣಿಜ್ಯೋದ್ಯಮದ ಚಟುವಟಿಕೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಆದರೇ ರಾಜ್ಯ ಸರ್ಕಾರ 2009-10ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ದೊಡ್ಡ ಮಟ್ಟದಲ್ಲಿ ಸಾಲವನ್ನು ಮಾಡಿ ಆರ್ಥಿಕ ಅಸ್ಥಿತಿ ತಂದಿತ್ತು. ಮತ್ತೆ ಈಗಲೂ ಕೂಡ ಅದೇ ಪರಿಸ್ಥಿತಿ ಎದುರಾಗಿದೆ ಎಂದು ಅವರು ಕಿಡಿಕಾರಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸುಮಾರು 1ಲಕ್ಷ 26 ಕೋಟಿ ಸಾಲ ಮಾಡಿ ರಾಜ್ಯದ ಆರ್ಥಿಕತೆ ಮೇಲೆ ದೊಡ್ಡಮಟ್ಟದ ಹೊಡೆತ ಬಿದ್ದಿದೆ. ಯಡಿಯೂರಪ್ಪ ಅವರಿಗೆ ನೈತಿಕತೆಯ ಇಲ್ಲದಂತಾಗಿದ್ದು, ರಾಜ್ಯದ ಜನತೆಯ ಜೊತೆಗೆ ಆಟವಾಡುತ್ತ ಜನರನ್ನು ಸಂಕಷ್ಟಕ್ಕೆ ದುಡುತ್ತಿದ್ದಾರೆ. ಅಲ್ಲದೇ ದುಂದುವೆಚ್ಚದಿಂದ ಅನುತ್ಪಾದಿತ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.