ಬೆಂಗಳೂರು: ಯೇಸು ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್ ಯಡಿಯೂರಪ್ಪನವರು ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿ ಎತ್ತರದ ಯೇಸು ಪ್ರತಿಮೆ ವಿಚಾರಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರನ್ನ ಗುರಿಯಾಗಿಸಿಕೊಂಡು ಟೀಕೆ ಮಾಡ್ಬೇಡಿ ಅಂತಾ ಸೂಚಿಸಿದ್ದಾರೆ.
ಯೇಸು ಪ್ರತಿಮೆ ವಿಚಾರದಲ್ಲಿ ಟೀಕೆ ಮಾಡುವುದ್ರಿಂದ ಒಂದು ಧರ್ಮವನ್ನ ಬಿಜೆಪಿಯಿಂದ ಸಂಪೂರ್ಣವಾಗಿ ದೂರ ಮಾಡಿದಂತಾಗುತ್ತೆ. ಇದು ಬಿಜೆಪಿಗಿಂತ ಡಿ.ಕೆ ಶಿವಕುಮಾರಗೆ ಪ್ಲಸ್ ಆಗುವ ಸಾಧ್ಯತೆ ಹೆಚ್ಚು. ಹೀಗಾಗಿ ಸಚಿವರು ಹಾಗೂ ಶಾಸಕರು ಟೀಕೆ ಮಾಡಬಾರದು ಅಂತಾ ಸೂಚನೆ ನೀಡಿದ್ದಾರೆ.
ಡಿಸೆಂಬರ್ 25ರಂದು ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ 114 ಅಡಿ ಎತ್ತರ ಯೇಸು ಪ್ರತಿಮೆ ನಿರ್ಮಾಣದ ಶಂಕುಸ್ಥಾನಪನೆಯನ್ನ ಡಿ.ಕೆ ಶಿವಕುಮಾರ ಮಾಡಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬಹುದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ.