ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ

171

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಪೋಕರಿಗಳ ಉಪಟಳ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮೆಜೆಸ್ಟಿಕ್ ಹತ್ತಿರ ಇರುವ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿನ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ಕೆಲ ಬಸ್ ಗಳಿಗೆ ಹಾನಿಯಾಗಿವೆ.

ಈ ರೀತಿಯಾಗಿ ಯಾರು ಕಲ್ಲು ತೂರಾಟ ನಡೆಸಿದ್ದಾರೆ. ಯಾವ ಕಾರಣಕ್ಕೆ ಇಂತಹ ಘಟನೆಗಳು ನಡೆಯುತ್ತಿವೆ ಅನ್ನೋ ಪ್ರಶ್ನೆ ಮೂಡಿದೆ. ಯಾಕಂದರೆ, ಇತ್ತೀಚೆಗೆ ನಗರದಲ್ಲಿ ಬೈಕ್, ಕಾರುಗಳನ್ನು ಜಖಂಗೊಳಿಸಲಾಗುತ್ತಿದೆ. ಇದರ ಹಿಂದಿನ ಉದ್ದೇಶ ಏನು ಅನ್ನೋದು ಗೊತ್ತಾಗಬೇಕಿದೆ.

ನಗರದಲ್ಲಿ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಕಿಡಿಗೇಡಿಗಳ ಉಪಟಳ ಹೆಚ್ಚಾಗುತ್ತಿದೆ. ಆರೋಪಿಗಳ ವಿರುದ್ಧ ಸಾರಿಯಾಗಿ ಕಾನೂನು ಅಸ್ತ್ರ ಪ್ರಯೋಗವಾಗುತ್ತಿಲ್ಲವಾ ಅನ್ನೋ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಯಾಕಂದರೆ, ಮನೆ ಮುಂದೆ ನಿಲ್ಲಿಸಿದ ವಾಹನಗಳು ಮುಂಜಾನೆ ಎದ್ದು ನೋಡಿದರೆ ಹಾನಿಯಾಗುತ್ತಿವೆ. ಹೀಗಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!