ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ಮತದಾನ ಬಹಿಷ್ಕರಿಸಿ ಮತಗಟ್ಟೆಯ ಮೇಲೆ ಕಲ್ಲು ತೂರಟ ನಡೆಸಿ ಸಾಕಷ್ಟು ಹಾನಿಗೊಳಿಸಿದ ಘಟನೆ ಜಿಲ್ಲೆಯ ಹನೂರ ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಇವಿಎಂ ಹಾನಿ ಸೇರಿದಂತೆ ಅಲ್ಲಿದ್ದ ವಸ್ತುಗಳನ್ನು ಹಾನಿಗೊಳಿಸಲಾಗಿದೆ.
ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿತ್ತು. ಇದರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಕುರ್ಚಿ, ಟೇಬಲ್ ಸೇರಿದಂತೆ ಅಲ್ಲಿದ್ದ ವಸ್ತುಗಳು ಜನರು ಆಕ್ರೋಶಕ್ಕೆ ಬಲಿಯಾಗಿವೆ.