ಪ್ರಜಾಸ್ತ್ರ ಸುದ್ದಿ
ಕಡಪ: ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿ 7 ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಈ ಒಂದು ದುರ್ಘಟನೆ ಸಂಭವಿಸಿದೆ.
ಕಳಸಪಾಡು ಬ್ಲಾಕ್ ನ ಮಾಮಿಪಲ್ಲೆ ಗ್ರಾಮದಲ್ಲಿನ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದೆ. ಇನ್ನು ಕೆಲವರು ಅವಶೇಷಗಳಡಿಯಲ್ಲಿ ಸಿಲಿಕಿದ್ದಾರೆ ಎಂದು ತಿಳಿದು ಬಂದಿದೆ.