ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸಿಬಿಎಸ್ ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ ಎಂದು ಮಂಗಳವಾರ ಪ್ರಧಾನಿ ತಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುವುದಿಲ್ಲ. ಹೀಗಾಗಿ ವಿದ್ಯಾರ್ಥಿಯೊಬ್ಬ ಫೇರ್ ವೆಲ್ ಕಾರ್ಯಕ್ರಮಕ್ಕೆ ಅನುಮತಿ ಕೊಡಿ ಸರ್ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿ ಫೇರ್ ವೆಲ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದ್ದು ಯಾಕಂದ್ರೆ, ತನ್ನ ಸಹಪಾಠಿ ನೇಹಾಳನ್ನ ಸೀರೆಯಲ್ಲಿ ನೋಡಬೇಕು ಎಂದಿದ್ದಾನೆ. ಪರೀಕ್ಷೆ ರದ್ದತಿ ಕುರಿತು ಪ್ರಧಾನಿ ಮೋದಿ ಮಾಡಿದ ಟ್ವೀಟ್ ಗೆ ವಿದ್ಯಾರ್ಥಿ ಕಾಮೆಂಟ್ ನಲ್ಲಿ ಈ ರೀತಿ ಮನವಿ ಮಾಡಿದ್ದು ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಹಲವು ಹಾಸ್ಯ ಮಾಡಿದ್ದಾರೆ.