ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಮತ್ತೊಂದು ಆಸಿಡ್ ದಾಳಿ ನಡೆದಿದೆ. ಈ ಮೂಕಲ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯ ಪ್ರಕರಣ ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಆಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ತರುವುದಾಗಿ ಹೇಳಿದ್ದಾರೆ.
ಆಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.