ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನೀರುಪಾಲದ ಘಟನೆ ಶೃಂಗೇರಿ ಶಾರದಾಂಬೆ ದೇವಸ್ಥಾನದ ಹತ್ತಿರದ ನದಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿ ಚಂದನ್ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿ ಚಂದನ್ ಜಿಗಣಿಯಲ್ಲಿರುವ ಕೃಷ್ಣ ಕಾಲೇಜಿನಲ್ಲಿ ಓದುತ್ತಿದ್ದ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದಾರೆ. ಈ ವೇಳೆ ಇಂತಹದೊಂದು ಅನಾಹುತ ಸಂಭವಿಸಿದೆ.