ಯಾದಗಿರಿ: ಕೆಂಭಾವಿ ಸಮೀಪದ ಬೈಚಬಾಳ ಗ್ರಾಮದಲ್ಲಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ. ಮೃತ ವಿದ್ಯಾರ್ಥಿ 14 ವರ್ಷದ ತಿರುಪತಿ ಚಂದ್ರಕಾಂತ ಗೊಂಬೆ ಅಂತಾ ತಿಳಿದು ಬಂದಿದೆ.
ಯಾದಗಿರಿ ಜಿಲ್ಲೆ ಕೆಂಭಾವಿ ಪಟ್ಟಣದ ಬಳಿಯ ಬೈಚಬಾಳ ಗ್ರಾಮದ ತಿರುಪತಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ಹೋದಾಗ, ಹಳೆ ವಿದ್ಯುತ್ ಕಂಬ ನೇರವಾಗಿ ತಿರುಪತಿ ಮೇಲೆ ಬಿದ್ದಿದೆ. ಇದ್ರಿಂದಾಗಿ ತಲೆಗೆ ತೀವ್ರ ಪೆಟ್ಟಾಗಿತ್ತು. ಕೆಂಭಾವಿ ಸರ್ಕಾರಿ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.