ಪ್ರಜಾಸ್ತ್ರ ಸುದ್ದಿ
ರಾಣೆಬೆನ್ನೂರು: ರಷ್ಯಾ ಹಾಗೂ ಉಕ್ರೇನ್ ಯುದ್ಧದಲ್ಲಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ ನಿಧನ ಹೊಂದಿದ್ದಾನೆ. ಇಂದು ಚಳಗೇರಿಯಲ್ಲಿರುವ ಆತನ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರು ಹಾಗೂ ಸ್ವಾಮೀಜಿ ಸಾಂತ್ವಾನ ಹೇಳಿದರು.
ನಂತರ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ ಪಾಟೀಲ, ಶಾಸಕ ಶಿವಕುಮಾರ ಉದಾಸಿ, ಹರಿಹರ ವೀರಶೈವ ಲಿಂಗಾಯತ ಪಂಚಮಶಾಲಿ ಜಗದ್ಗುರು ಪೀಠದ ವಚನಾನಂದ ಶ್ರೀ ಸೇರಿ ಅನೇಕರಿದ್ದರು.