ಪ್ರಜಾಸ್ತ್ರ ಸುದ್ದಿ
ಧಾರವಾಡ/ಬೆಂಗಳೂರು: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡದಲ್ಲಿ ಅಂಜುಮಾನ್ ಪ್ರತಿಭಟನೆ ನಡೆಸಿ, ಹಂತಕನಿಗೆ ಕಠಿಣ ಕಾನೂನು ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.
ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಂಸ್ಥೆಯ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಇನ್ನು ನಗರದ ಬಿಆರ್ ಟಿಸಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಅಂಗಡಿಕಾರರು ಸ್ವಯಂ ಪ್ರೇರಿತರಾಗಿ ವ್ಯಾಪರ ಬಂದ್ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿಯೂ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಫಾರ್ ನೇಹಾ ಎಂದು ಪೋಸ್ಟರ್ ಅಂಟಿಸಿ, ಹಂತಕ ಫಯಾಜ್ ಗೆ ಉಗ್ರ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡದ ಮಾರುಕಟ್ಟೆ ಬಿಕೋ ಎನ್ನುತ್ತಿದೆ.
ಇನ್ನು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದರಿಂದ ಇಂದು ಬೆಂಗಳೂರು ಬಿಟ್ಟು ರಾಜ್ಯದ ವಿವಿಧ ಪ್ರತಿಭಟನೆ ನಡೆಸಲಾಗುತ್ತಿದೆ. ನೇಹಾ ಹತ್ಯೆ ಲವ್ ಜಿಹಾದ್ ಎಂದು ಆರೋಪಿಸುತ್ತಿರುವ ಬಿಜೆಪಿ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.