ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗ ವರದಿಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಕೆ ಮಾಡಲಾಯಿತು.
ಮೂಲವೇತನದ ಶೇಕಡ 27.5ರಷ್ಟು ಹೆಚ್ಚಿಗೆ ಮಾಡಲು ಶಿಫಾರಸು ಮಾಡಿದೆ. ಕನಿಷ್ಠ ಮೂಲವೇತನ 17 ಸಾವಿರ ರೂಪಾಯಿಗಳಿಂದ 27 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಆರ್ಥಿಕ ಇಲಾಖೆಗೆ ವರದಿ ನೀಡಲಾಗುತ್ತೆ. ಅಲ್ಲಿ ಸಂಪೂರ್ಣ ಅಧ್ಯಯನದ ಬಳಿಕ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.