ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಹಾಗೂ ಲೇಖಕಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನಾಮನಿರ್ದೇಶನ ನೇಮಕ ಮಾಡಿದ್ದಾರೆ. ಈ ಕುರಿತು ಶುಕ್ರವಾರ ಪ್ರಕಟಣೆ ಹೊರಡಿಸಲಾಗಿದೆ.
ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. ರಾಜ್ಯಸಭೆಗೆ ಸುಧಾಮೂರ್ತಿಯವರನ್ನು ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿಯಾಗಿದೆ. ಸಮಾಜಸೇವೆ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಿಗೆ ಸುಧಾಜೀ ಅವರ ಕೊಡುವೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ಶಕ್ತಿಯುತ ಸಾಕ್ಷಿಯಾಗಿದೆ. ನಾರಿ ಶಕ್ತಿ ನಮ್ಮ ದೇಶದ ಹಣೆಬರಹವನ್ನು ರೂಪಿಸುವಲ್ಲಿ ಸಾಮರ್ಥ್ಯ ತೋರಿಸುತ್ತದೆ. ಅವರ ಸಂಸದೀಯ ಅಧಿಕಾರಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.