ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ನೇಹಿತರು ಹಣ ತೆಗೆದುಕೊಂಡು ಮೋಸ ಮಾಡಿದ್ದಾರೆ ಎಂದು, ಫೇಸ್ ಬುಕ್ ನಲ್ಲಿ ಲೈವ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಜುನಾಥ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಜುನಾಥ ಸ್ನೇಹಿತ ಪವನ್ ಹಾಗೂ ಆತನ ಆಪ್ತರಿಗೆ 11 ಲಕ್ಷ ರೂಪಾಯಿ ನೀಡಿದ್ದರಂತೆ. ವಾಪಸ್ ಕೊಡುವುದಾಗಿ ಹೇಳಿ ಹಣ ಪಡೆದು 6 ತಿಂಗಳು ಕಳೆದ್ರು ಹಣ ವಾಪಸ್ ನೀಡಿಲ್ವಂತೆ. ಕೇಳಿದ್ರೆ ಜೀವ ತೆಗೆಯುವ ಬೆದರಿಕೆ ಹಾಕಿದ್ರು ಎಂದು ಫೇಸ್ ಬುಕ್ ನಲ್ಲಿ ಹೇಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.