Search

ಹಾಲು ಮಾರುತ್ತಿದ್ದ ಸುಖು ಇಂದು ಹಿಮಾಚಲ ಮುಖ್ಯಮಂತ್ರಿ

149

ಪ್ರಜಾಸ್ತ್ರ ಸುದ್ದಿ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 68ರಲ್ಲಿ 40 ಸ್ಥಾನಗಳಲ್ಲಿ ಗೆದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ಮೂಲಕ ಆಡಳಿತರೂಢ ಬಿಜೆಪಿಯನ್ನು ಸೋಲಿಸಲಾಗಿದೆ. ಭಾನುವಾರ ಮಧ್ಯಾಹ್ನ ಸುಮಾರು 1.30ಕ್ಕೆ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಸುಖು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಒಂದು ಕಾಲದಲ್ಲಿ ಹಾಲು ಮಾರುತ್ತಿದ್ದ ಸುಖು, ವಿದ್ಯಾರ್ಥಿಯಾಗಿದ್ದಲೇ ನಾಯಕತ್ವದ ಗುಣ ಬೆಳೆಸಿಕೊಂಡಿದ್ದರು. ಎನ್ಎಸ್ ಯುಐನಲ್ಲಿ ಸಕ್ರಿಯರಾಗಿದ್ದರು. ಪಾಲಿಕೆ ಚುನಾವಣೆಯಲ್ಲಿ ಗೆದ್ದು ರಾಜಕೀಯ ಪ್ರವೇಶ ಮಾಡಿದರು. ನಂತರ ಹಂತ ಹಂತವಾಗಿ ಮೇಲೆ ಬಂದರು. 2003ರಿಂದ ನದೌನ್ ಮತಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಸುಖು ಇಂದು ಸಿಎಂ ಆಗಿದ್ದಾರೆ. ಮುಖೇಶ್ ಅಗ್ನಿಹೋತ್ರಿ ಡಿಸಿಎಂ ಆಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!