ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದಂತೆ ಕರ್ನಾಟಕದಲ್ಲಿಂದು ಲಾಕ್ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ರಾಜ್ಯದ ಜನತೆ ಸಿಎಂ ಆದೇಶಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳು ಸ್ತಬ್ಧವಾಗಿವೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು ಹಳೆ ಭಾಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ ಭಾಗ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಗಡಿ ಭಾಗದ ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಯಶಸ್ವಿಯಾಗಿದ್ದು, ಒಂದಿಷ್ಟು ಜಿಲ್ಲೆಗಳ ಚಿತ್ರಣ ಇಲ್ಲಿದೆ ನೋಡಿ.