ಪ್ರಜಾಸ್ತ್ರ ಸುದ್ದಿ
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಹಿರಿಯ ನ್ಯಾಯವಾದಿ ಪ್ರಶಾಂತ ಭೂಷಣ ಅವರಿಗೆ ಸುಪ್ರೀಂ ಕೋರ್ಟ್ 1 ರೂಪಾಯಿ ದಂಡ ವಿಧಿಸಿದೆ. ಇದು ತಪ್ಪಿದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ವಕೀಲಿಕೆ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಅರುಣ ಮಿಶ್ರಾ, ಬಿ.ಆರ್ ಗವಾಯಿ ಹಾಗೂ ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯಪೀಠ ಈ ತೀರ್ಪು ನೀಡಿದೆ. ನ್ಯಾಯಾಂಗ ನಿಂದನೆ ಬಗ್ಗೆ ಪ್ರಶಾಂತ ಭೂಷಣ 2 ಟ್ವೀಟ್ ಮಾಡಿದ್ರು. ಹೀಗಾಗಿ ಸುಪ್ರೀಂ ಕೋರ್ಟ್ ಸ್ವಯಂ ದೂರು ದಾಖಲಿಸಿ ಇಂದು ತೀರ್ಪು ಪ್ರಕಟಿಸಿದೆ.
ಆಗಸ್ಟ್ 14ರಂದು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿತ್ತು. ಹೀಗಾಗಿ ಆಗಸ್ಟ್ 25ಕ್ಕೆ ಕ್ಷಮೆಯಾಚಿಸಲು ಸೂಚಿಸಿತ್ತು. ಅವರು ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ಆಗಸ್ಟ್ 31ರವರೆಗೂ ತೀರ್ಪು ಕಾಯ್ದಿರಿಸಿತ್ತು. ಇಂದು 1 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.