ಹಿರಿಯ ವಕೀಲ ಪ್ರಶಾಂತ ಭೂಷಣ ಅಪರಾಧಿ

316

ಪ್ರಜಾಸ್ತ್ರ ಸುದ್ದಿ

ನವದೆಹಲಿ: ನ್ಯಾಯಾಂಗ ವ್ಯವಸ್ಥೆ ವಿರುದ್ಧ ಟ್ವೀಟ್ ಮಾಡಿದ್ದ ಹಿರಿಯ ವಕೀಲ, ಸಾಮಾಜಿಕ ಹೋರಾಟಗಾರ ಪ್ರಶಾಂತ ಭೂಷಣಗೆ ತೀವ್ರ ಹಿನ್ನೆಡೆಯಾಗಿದೆ. ಇಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಅವರು ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಹಾಗೂ ಅವರ ಹಿಂದಿನ ನಾಲ್ವರು ನ್ಯಾಯಮೂರ್ತಿಗಳ ಬಗ್ಗೆ ಎರಡು ಟ್ವೀಟ್ ಮಾಡಿದ್ರು. ಇದು ನ್ಯಾಯಾಂಗ ನಿಂದನೆ ಎಂದು ತೀರ್ಪು ನೀಡಿರುವ ಸುಪ್ರೀಂ, ಆಗಸ್ಟ್ 20ರಂದು ಶಿಕ್ಷೆ ಪ್ರಕಟಿಸಲಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ನ್ಯಾಯಪೀಠ ತೀರ್ಪು ನೀಡಿದೆ.

ಕಳೆದ ಜೂನ್ 27ರಂದು ಸುಪ್ರೀಂ ಕೋರ್ಟ್ ಹಾಗೂ ಜೂನ್ 29ರಂದು ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಅವರ ಬಗ್ಗೆ ಟ್ವೀಟ್ ಮಾಡಿದ್ರು. ಅದು ವೈರಲ್ ಆಗಿ, ನ್ಯಾಯಾಂಗ ನಿಂದನೆಯಾಗಿದೆ ಅನ್ನೋದು ಕೇಳಿ ಬಂದಿತು. ಆಗ ಟ್ವೀಟರ್ ಆ ಪೋಸ್ಟ್ ತೆಗೆದು ಹಾಕಿತು. ಸುಪ್ರೀಂ ಕೋರ್ಟ್ ಪ್ರಶಾಂತ ಭೂಷಣಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.




Leave a Reply

Your email address will not be published. Required fields are marked *

error: Content is protected !!