ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸಾಮಾಜಿಕ ಹೋರಾಟಗಾರ, ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ ನವಲಖಾ ಅವರ ಜಾಮೀನು ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬಾಂಬೆ ಹೈಕೋರ್ಟ್ ಫೆಬ್ರವರಿ 8ರಂದು ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ರು.
ಡಿಸೆಂಬರ್ 31, 2017ರಲ್ಲಿ ಎಲ್ಗಾರ್ ಪರಿಷದ್ ಸಭೆಯಲ್ಲಿ ಹೋರಾಟಗಾರರೊಬ್ಬರು ಭಾಷಣ ಮಾಡಿದ್ರು. ಇದು ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು ಹಾಗೂ ಮಾವೋವಾದಿಗಳ ಬೆಂಬಲಿತ ಸಭೆಯಾಗಿತ್ತು ಎಂದು ಪ್ರಕರಣ ದಾಖಲಿಸಲಾಗಿದೆ. ಏಪ್ರಿಲ್ 14, 2020ರಲ್ಲಿ ಗೌತಮ ನವಲಖಾ ಎನ್ಐಎಗೆ ಶರಣಾಗಿದ್ರು. ಇವರನ್ನ ನವಿ ಮುಂಬೈನ ತಲೊಜಾ ಜೈಲಿನಲ್ಲಿಡಲಾಗಿದೆ.