ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಲೋಕಸಭೆ ಚುನಾವಣೆ ಜೊತೆಗೆ ಆಂಧ್ರಪ್ರದೇಶ, ಅರುಣಚಾಲ ಪ್ರದೇಶ, ಸಿಕ್ಕಿಂ ರಾಜ್ಯಗಳ ವಿಧಾನಸಭೆ ಚುನಾವಣೆ ಸಹ ನಡೆಯುತ್ತಿವೆ. ಅವುಗಳ ದಿನಾಂಕವನ್ನು ಸಹ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದೆ. ಇನ್ನು ಕರ್ನಾಟಕದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಿಧಾನಸಭೆ ಉಪ ಚುನಾವಣೆ ದಿನಾಂಕ ಸಹ ಪ್ರಕಟಿಸಲಾಗಿದೆ
ಮೇ 7ರಂದು ಸುರಪುರ ವಿಧಾನಸಭೆಗೆ ಉಪ ಚುನಾವಣೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಕಳೆದ ಫೆಬ್ರವರಿಯಲ್ಲಿ ನಿಧನರಾಗಿದ್ದಾರೆ.