ಪ್ರಜಾಸ್ತ್ರ ಸುದ್ದಿ
ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಇಂದೇ ಉಪ ಚುನಾವಣೆ ನಡೆಯುತ್ತಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬಾದ್ಯಾಪುರ ಗ್ರಾಮದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಅದು ಕಲ್ಲು ತೂರಾಟ ನಡೆಸುವ ಹಂತಕ್ಕೆ ಹೋಗಿದೆ. ಇದರಿಂದಾಗಿ ಓರ್ವನಿಗೆ ಗಂಭೀರವಾಗಿದೆ. ಗಲಾಟೆ ಪರಿಣಾಮ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಗಲಾಟೆಯನ್ನು ನಿಯಂತ್ರಿಸಿದ್ದಾರೆ.