ಪ್ರಜಾಸ್ತ್ರ ಸುದ್ದಿ
ಮಂಗಳೂರು: ಸುರತ್ಕಲ್ ಹತ್ತಿರದ ಎನ್ಐಟಿಕೆ ಬಳಿ ಅಕ್ರಮವಾಗಿ ಟೋಲ್ ಗೇಟ್ ನಿರ್ಮಾಣ ಮಾಡಲಾಗಿದೆ. ಅದನ್ನು ತೆರವುಗೊಳಿಸಬೇಕು ಎಂದು ಹೋರಾಟ ಮಾಡಲಾಗುತ್ತಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸರ್ಕಾರ ತೆಗೆದುಕೊಂಡಿದ್ದ ಅವಧಿ ಅ.18ಕ್ಕೆ ಮುಗಿದಿದೆ. ಅದನ್ನು ನಾವೇ ತೆರವುಗೊಳಿಸುತ್ತೇವೆ ಎಂದು ಹೋರಾಟಗಾರರು ಹೇಳಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆ ತಡರಾತ್ರಿ ಹೋರಾಟಗಾರರ ಮನೆಗೆ ನೋಟಿಸ್ ಕಳಿಸಿದ್ದು, ಅದು ಸಹ ತೀವ್ರ ಚರ್ಚೆಗೆ ಕಾರಣವಾಯಿತು. ಪೂರ್ವನಿಗದಿಯಂತೆ ಟೋಲ್ ಗೇಟ್ ಮುತ್ತಿಗೆಗೆ ಯತ್ನಿಸಿದಾಗ ಪೊಲೀಸರು ತಡೆದಿದ್ದಾರೆ.
2015ರಲ್ಲಿ ಸುರತ್ಕಲ್ ಟೋಲ್ ಕೇಂದ್ರ ಸ್ಥಾಪಿಸಲಾಯಿತು. 2016ರಲ್ಲಿ ಹೆಜಮಾಡಿ ಟೋಲ್ ಕೇಂದ್ರ ಪ್ರಾರಂಭಿಸಿದ್ದರೂ ಸುರತ್ಕಲ್ ಟೋಲ್ ಗೇಟ್ ಬಂದ್ ಮಾಡಿಲ್ಲ. 6 ವರ್ಷಗಳಲ್ಲಿ 400 ಕೋಟಿ ರೂಪಾಯಿ ಟೋಲ್ ಸಂಗ್ರಹಿಸಲಾಗಿದೆ. ಅನಧಿಕೃತ ಟೋಲ್ ಗೇಟ್ ತೆರವಿಗೆ ಹೋರಾಟ ಮಾಡಿದರೂ ಪ್ರಯೋಜನವಾಗುತ್ತಿಲ್ಲವೆಂದು ಕಿಡಿ ಕಾರಿದ್ದಾರೆ.