‘ಅಂಗಡಿ ಕೇಂದ್ರ ಸಚಿವರಾಗಿದ್ದರೂ ಬೆಳಗಾವಿಯಲ್ಲಿ ಅಂತ್ಯಕ್ರಿಯೆ ಮಾಡ್ಲಿಲ್ಲ’

344

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸುರೇಶ ಅಂಗಡಿ ಕೇಂದ್ರ ಸಚಿವರಾಗಿದ್ರೂ ಅವರ ಅಂತ್ಯಸಂಸ್ಕಾರವನ್ನ ಬೆಳಗಾವಿಯಲ್ಲಿ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ಲಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ವಾಗ್ದಾಳಿ ನಡೆಸಿದ್ರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತ್ನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ರು.

ಸುರೇಶ ಅಂಗಡಿ ಅವರ ಪಾರ್ಥಿವ ಶರೀರ ಬೆಳಗಾವಿಗೆ ತರಬೇಕಿತ್ತು. ಕ್ಷೇತ್ರದ ಜನತೆಗೆ ಅಂತಿಮ ದರ್ಶನಕ್ಕೆ ಅವಕಾಶ ಕೊಡಬೇಕಿತ್ತು. ಬೆಳಗಾವಿಯಲ್ಲಿ ಮಿಲಿಟರಿ ಬೇಸ್ ಇದ್ರೂ ಅವರನ್ನ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಆಗ್ಲಿಲ್ಲ. ಎರಡು ತಿಂಗಳ ಹಿಂದೆ ದೊಡ್ಡ ರಾಜಕಾರಣ ನಡೆದಿದೆ ಎಂದು ಕುಟುಂಬಸ್ಥರು ಹೇಳ್ತಿದ್ದಾರೆ. ಇಂಥಾ ಸಂದರ್ಭದಲ್ಲಿ ಕುಟುಂಬಸ್ಥರಿಗೆ ನ್ಯಾಯ ಕೊಡಿಸಲು ಅವರದೆ ಸರ್ಕಾರಗಳಿಗೆ ಆಗ್ಲಿಲ್ಲವೆಂದರು.

ಇನ್ನು ಹತ್ರಾಸ್ ಅತ್ಯಾಚಾರ, ಕೊಲೆ ಸಂಬಂಧ ಮಾತ್ನಾಡಿ, ಯೋಗಿ ಆದಿತ್ಯನಾಥ ಸರ್ಕಾರ, ನಮ್ಮ ದೇಶದ ಗೌರವ, ಸ್ವಾಭಿಮಾನ, ಸಮುದಾಯದ ಸೇರಿ ಇಡೀ ಪ್ರಪಂಚಕ್ಕೆ ಕಪ್ಪು ಚುಕ್ಕೆ. ಈ ಘಟನೆಯಿಂದ ಇಡೀ ಮನುಕುಲಕ್ಕೆ ಅಪಮಾನವಾಗಿದೆ ಎಂದು ವಾಗ್ದಾಳಿ ನಡೆಸಿದ್ರು.




Leave a Reply

Your email address will not be published. Required fields are marked *

error: Content is protected !!