ನವದೆಹಲಿ: ಮಾಜಿ ಕೇಂದ್ರ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ನವದೆಹಲಿಯಲ್ಲಿರುವ ಲೋಧಿ ಚಿತಾಗಾರದಲ್ಲಿ ಬುಧವಾರ ಸಂಜೆ 4.45ರ ಸುಮಾರಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯ್ತು.
ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ಮಾಡಲಾಯ್ತು. ಈ ವೇಳೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾನಿ, ಭೂತಾನ್ ಮಾಜಿ ಪ್ರಧಾನಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗಿಯಾಗಿದ್ರು.
ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ ನಿಧನರಾಗಿದ್ರು. ಪತಿ ಕೌಶಲ್ಯ ಸ್ವರಾಜ್ ಹಾಗೂ ಪುತ್ರಿಯನ್ನ ಅಗಲಿದ್ದಾರೆ.