ಡಿಸೇಲ್ ತರಲು ಹೋದವನು ಸುಟ್ಟು ಕರಕಲಾಗಿದ್ದೇಗೆ?

384

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಕಳೆದ ಎರಡು ದಿನಗಳ ಹಿಂದೆ ಡಿಸೇಲ್ ತೆಗೆದುಕೊಂಡು ಬರಲು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕಂಬಾಗಿ ಬಳಿ ಈ ಘಟನೆ ನಡೆದಿದೆ.

ನಗರದ ಎಸ್ಪಿ ಕಚೇರಿ ಹಿಂಭಾಗದ ನಿವಾಸಿ 23 ವರ್ಷದ ಅಕ್ಷಯ ಲವಗಿ ಅನ್ನೋ ಯುವಕನ ಶವವಾಗಿ ಪತ್ತೆಯಾಗಿದ್ದಾನೆ. ಡಿಸೇಲ್ ತರಲು ಸ್ಕೂಟರ್ ಮೇಲೆ ತೆರಳಿದ್ದ ಅಕ್ಷಯ ಕಂಬಾಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!