ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಕೊನೆ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಟಿ.ಎ ಸರವಣಗೆ ಟಿಕೆಟ್ ನೀಡಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಗೆ ಕೊನೆಯ ಕ್ಷಣವಾಗಿದೆ.
ಬಿಜೆಪಿ, ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಜೆಡಿಎಸ್ ತನ್ನ ಹುರಿಯಾಳ ಸೂಚಿಸಿದೆ. ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಬಿ ಫಾರಂ ನೀಡಿದರು. ಮಾಜಿ ಪರಿಷತ್ ಸದಸ್ಯರಾಗಿರುವ ಟಿ.ಎ ಸರವಣಗೆ ಮತ್ತೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವ ಸಿ.ಎಂ ಇಬ್ರಾಹಿಂಗೆ ಟಿಕೆಟ್ ನೀಡಲಾಗುತ್ತೆ ಅನ್ನೋದು ಸುಳ್ಳಾಗಿದೆ.