ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಸಿಂದಗಿ ತಾಲೂಕು ಅಧ್ಯಕ್ಷರಾಗಿ ಪೀರು ಕೆರೂಟಗಿ ಹಾಗೂ ಉಪಾಧ್ಯಕ್ಷರಾಗಿ ಮಲ್ಲು ಹಿರೋಳ್ಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಗರದಲ್ಲಿ ನಡೆದ ಮಹಾಸಭಾದ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆ, ತಾಲೂಕು, ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ವೇಳೆ ರೈತಪರ ಹೋರಾಟಗಾರ ಪೀರು ಕೆರೂಟಗಿ ಅವರನ್ನು ಸಿಂದಗಿ ತಾಲೂಕು ಅಧ್ಯಕ್ಷರನ್ನಾಗಿ, ಸಮಾಜ ಸೇವಕ ಮಲ್ಲು ಹಿರೋಳ್ಳಿ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ವೇಳೆ ತಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಪ್ರಕಾಶ ಕೊಟರಗಸ್ತಿ, ಸಿಂದಗಿಯ ಮಾಜಿ ಶಾಸಕ ಶರಣಪ್ಪ ಸುಣಗಾರ, ಮುಖಂಡ ಶರಣಪ್ಪ ಕಣಮೇಶ್ವರ, ರಾಜು ನರಗೋಧಿ, ಗುರು ತಳವಾರ, ಬಸವರಾಜ ಭೂತಿ, ಸಂಜೀವಕುಮಾರ ಡಾಂಗಿ, ಭರತೇಶ ಹಿರೋಳ್ಳಿ ಸೇರಿ ಇತರರು ಉಪಸ್ಥಿತರಿದ್ದರು.