ತಳವಾರ, ಪರಿವಾರ ಎಸ್ಟಿಗೆ ಸೇರ್ಪಡೆ

744

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದ ತಳವಾರ, ಪರಿವಾರ ಸಮುದಾಯಕ್ಕೆ ಇದೀಗ ನ್ಯಾಯ ಸಿಕ್ಕಿದೆ. ಕೇಂದ್ರ ಸರ್ಕಾರ ಎಸ್ಟಿಗೆ ಅಧಿಸೂಚನೆ ಹೊರಡಿಸಿದ ಎರಡು ತಿಂಗಳ ಬಳಿಕ ರಾಜ್ಯದಲ್ಲಿಯೂ ಇದು ಜಾರಿಗೆ ಬಂದಿದೆ. ಹೀಗಾಗಿ ಇನ್ಮುಂದೆ ಈ ಸಮುದಾಯ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆಯಬಹುದು.

ರಾಜ್ಯದಲ್ಲಿರುವ ತಳವಾರ, ಪರಿವಾರ ಹಾಗೂ ಕಾರವಾರ, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿರುವ ಸಿದ್ಧಿ ಸಮುದಾಯದವರನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕೊನೆಗೂ ಈ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನ ಸಮಾಜದ ಮುಖಂಡರು ಧನ್ಯವಾದಗಳನ್ನ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!