ಪ್ರಜಾಸ್ತ್ರ ಸುದ್ದಿ
ಮೈಸೂರು: ತಳವಾರ ಮತ್ತು ಪರಿವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಅಧಿಸೂಚನೆ ಸಂಬಂಧ ಶನಿವಾರ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಈಗಾಗ್ಲೇ ಅಧಿಸೂಚನೆ ಹೊರಡಿಸಿದೆ. ಸಿಎಂ ಯಡಿಯೂರಪ್ಪನವರೊಂದಿಗೆ ಮುಂದಿನ ಶನಿವಾರ ಸಭೆ ನಡೆಸಿ, ಕರ್ನಾಟಕದಲ್ಲಿ ಅಧಿಸೂಚನೆ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಅಂತಾ ಹೇಳಿದ್ರು.
ಇಲ್ಲಿನ ಜಲದರ್ಶನಿಯಲ್ಲಿ ನಾಯಕ ಸಮಾಜದ ಮುಖಂಡರು, ವಿವಿಧ ಗ್ರಾಮಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಮಾತ್ನಾಡಿದ್ರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು, ಸರ್ಕಾರದಿಂದ ಕೃಷಿಗೆ ಸಿಗುವ ಸೌಲಭ್ಯಗಳನ್ನ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದ್ರು.