ಪ್ರಜಾಸ್ತ್ರ ಸುದ್ದಿ
ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದೈಹಿಕ ಶಿಕ್ಷಕರ ಸಂಘದ ಸಹಯೋಗದಲ್ಲಿ ನೀಡುವ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಿರಿಗನ್ನಡ ಆದರ್ಶ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ನಿಮಿತ್ತ ನೀಡುವ ಪ್ರಶಸ್ತಿಗೆ ಜಿಲ್ಲೆಯ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಸಿದ್ದಲಿಂಗ ಚೌಧರಿ ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಶಿಕ್ಷಕರು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳ ಪ್ರಾಧ್ಯಾಪಕರು ಅರ್ಜಿ ಸಲ್ಲಿಸಲಬಹುದಾಗಿದೆ. ತಮ್ಮ ಸ್ವವಿವರವುಳ್ಳ ಗುರುತಿನ ಪತ್ರದೊಂದಿಗೆ, ತಮ್ಮ ಸೇವಾ ಅವಧಿಯಲ್ಲಿ ಮಾಡಿರುವ ಶೈಕ್ಷಣಿಕ ಅಭಿವೃದ್ಧಿ ಕಾರ್ಯಗಳ ಸಂಕ್ಷಿಪ್ತ ವರದಿಯನ್ನ ಲಗತ್ತಿಸಿಲು ಕೋರಲಾಗಿದೆ. ಆಗಸ್ಟ್ 26 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ ಹೀಗಿದೆ:
ಮುಖ್ಯಗುರುಗಳು, ಮಂದಾರ ಪಬ್ಲಿಕ್ ಸ್ಕೂಲ್, ಶಾಂತವೀರ ನಗರ, ಬಂದಾಳ ರಸ್ತೆ, ಸಿಂದಗಿ-586128. ಹೆಚ್ಚಿನ ಮಾಹಿತಿಗಾಗಿ 9845741778, 9972573827 ಈ ಸಂಖ್ಯೆಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.