ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಳವಾರ ಮಹಾಸಭಾ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ, ಗುರುದೇವ ಆಶ್ರಮದ ಶಾಂತಗಂಗಾಧರ ಮಹಾಸ್ವಾಮಿಗಳ 76ನೇ ಹುಟ್ಟು ಹಬ್ಬ, ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂನ್ 11ಕ್ಕೆ ಆಯೋಜಿಸಲಾಗಿದೆ.
ಈ ಕುರಿತು ಮಾತನಾಡಿರುವ ನೌಕರರ ಸಂಘದ ಪದಾಧಿಕಾರಿಗಳು, ಈ ಮೊದಲು ಅನುಗ್ರಹ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅನಿವಾರ್ಯ ಕಾರಣದಿಂದ ಸ್ಥಳ ಬದಲಾವಣೆಯಾಗಿದ್ದು, ಪಟ್ಟಣದ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಇರುವ ಬಸವ ಮಂಟಪದಲ್ಲಿ ಜೂನ್ 11 ಭಾನುವಾರ ಮುಂಜಾನೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ನೂತನ ಶಾಸಕ ಅಶೋಕ ಮನಗೂಳಿ ಅವರಿಗೆ ವಿಶೇಷ ಸನ್ಮಾನ ನಡೆಸಲಾಗುತ್ತಿದೆ ಅಂತಾ ತಿಳಿಸಿದರು.
ಈ ವೇಳೆ ಶಾಂತಗಂಗಾಧರ ಮಹಾಸ್ವಾಮಿಗಳು, ಸಂಘದ ಗೌರವ ಅಧ್ಯಕ್ಷ ಮಹಾಂತೇಶ ಯರನಾಳ, ರಾಜ್ಯ ಉಪಾಧ್ಯಕ್ಷ ರಾಜಕುಮಾರ ನರಗೋದಿ, ಪುರಸಭೆ ಸದಸ್ಯ ಬಸವರಾಜ ಯರನಾಳ, ಚಂದ್ರಕಾಂತ ಬೂದಿಹಾಳ, ಶಿಕ್ಷಕ ಸಂಜೀವಕುಮಾರ ಡಾಂಗಿ ಉಪಸ್ಥಿತರಿದ್ದರು.