ತಮಿಳುನಾಡು ಪ್ರವಾಹ, ರೈಲಲ್ಲಿ ಸಿಲುಕಿದ 800 ಪ್ರಯಾಣಿಕರು

147

ಪ್ರಜಾಸ್ತ್ರ ಸುದ್ದಿ

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದೆ. ಇದರಿಂದಾಗಿ ಸಾಕಷ್ಟು ಸಾವು, ನೋವುಗಳು ಸಂಭವಿಸಿವೆ. ಇದರ ನಡುವೆ ಶ್ರೀವೈಕುಂಠಂ ರೈಲು ನಿಲ್ದಾಣದಲ್ಲಿ ಸಹ ನೀರು ನುಗ್ಗಿವೆ. ಇದರ ಪರಿಣಾಮ ತಿರುಚಂದೂರ್-ಚೆನ್ನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಬರೋಬ್ಬರಿ 800 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವ ಪ್ರಯಾಣಿಕರ ರಕ್ಷಣೆಗೆ ಸೇನಾ ತಂಡ ಆಗಮಿಸಿದೆ. ಈಗಾಗ್ಲೇ ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ವೈದ್ಯಕೀಯ ನೆರವು ಸಹ ನೀಡಲಾಗುತ್ತಿದೆ. ಎನ್ ಡಿಆರ್ ಎಫ್, ವಾಯುಪಡೆ, ರೈಲ್ವೆ ಹಾಗೂ ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ದೆಹಲಿಯಲ್ಲಿರುವ ಮುಖ್ಯಮಂತ್ರಿ ಸ್ಟಾಲಿನ್, ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜನರ ರಕ್ಷಣೆಗೆ ಎಲ್ಲ ರೀತಿಯ ಕೆಲಸ ಮಾಡಿ ಎಂದಿದ್ದಾರೆ. ಮಳೆ ಕಡಿಮೆಯಾಗಿದ್ದರೂ ಪ್ರವಾಹ ಮಾತ್ರ ತಗ್ಗಿಯಿಲ್ಲ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.




Leave a Reply

Your email address will not be published. Required fields are marked *

error: Content is protected !!