ಪ್ರಜಾಸ್ತ್ರ ಸುದ್ದಿ
ಚೆನ್ನೈ: ತಮಿಳುನಾಡಿ ಮಾಜಿ ಸಿಎಂ, ಎಐಎಡಿಎಂಕೆ ಪಕ್ಷದ ನಾಯಕ ಪನ್ನೀರ್ ಸ್ವೆಲಂ ಅವರ ಪತ್ನಿ ಬುಧವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಲಕ್ಷ್ಮೀ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಹೃದಯಾಘಾತವಾಗಿ ನಿಧನರಾಗಿದ್ದಾರೆ.
ಕಳೆದ 10 ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಇಂದು ಅವರನ್ನು ಬಿಡುಗಡೆ ಮಾಡಲು ಸಹ ಸಿದ್ಧತೆ ನಡೆಸಲಾಗಿತ್ತು. ದುರಾದೃಷ್ಟವಶಾತ್, ಬೆಳಗ್ಗೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.