ಪ್ರಜಾಸ್ತ್ರ ಸುದ್ದಿ
ಮೈಸೂರು: ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಎಐಸಿಸಿಗೆ ಪತ್ರ ಬರೆದಿದ್ದು, ನನಗೆ ಈ ಬಾರಿ ಟಿಕೆಟ್ ಬೇಡ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.
ನನ್ನ ಮೇಲೆ ಹಲ್ಲೆಯಾದ ಮೇಲೆ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಮೊದಲಿನಂತೆ ನಾನು ಮಾನಸಿಕವಾಗಿ, ದೈಹಿಕವಾಗಿ ಶಕ್ತಿ ಹೊಂದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಕಾಂಗ್ರೆಸ್ ನಲ್ಲೇ ಮುಂದುವರೆಯುತ್ತೇನೆ ಎಂದಿದ್ದಾರೆ.
ಮಾಜಿ ಸಚಿವ, ಹಾಲಿ ಶಾಸಕ ಸೇಠ್ ನಿರ್ಧಾರದಿಂದ ಬೆಂಬಲಿಗರು ಮನೆ ಮುಂದೆ ದೌಡಾಯಿಸಿದ್ದಾರೆ. ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಿರಿ ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮೇಲೆ ಇದು ಯಾವ ರೀತಿ ಪರಿಣಾಮ ಬೀರುತ್ತೆ ಕಾದು ನೋಡಬೇಕು.